ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇದೀಗ ನಾಡದೇವತೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಆಷಾಢ ಮಾಸ ಆರಂಭವಾದ ಹಿನ್ನಲೆಯಲ್ಲಿ ಅವರು ಪೂಜೆ ಸಲ್ಲಿಸಿದ್ದಾರೆ. ಹೌದು, ಇದು ದರ್ಶನ್ ಅವರಿಗೆ ಹೊಸತೇನಲ್ಲ. ಚಾಮುಂಡೇಶ್ವರಿ ದೇವಾಲಯಕ್ಕೆ ದರ್ಶನ್ ಭೇಟಿ ನೀಡುತ್ತಲೇ ಇರುತ್ತಾರೆ.
ಆಷಾಢ ಮಾಸ ಅಂದರೆ ಅದು ವಿಶೇಷ ದಿನ. ಹೀಗಾಗಿ ದರ್ಶನ್ ಆಗಾಗ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿರುತ್ತಾರೆ. ತಮ್ಮ ಸ್ನೇಹಿತರ ಜತೆಗೂಡಿ ಬಂದು ದೇವಿಯ ದರ್ಶನ ಪಡೆದ ದರ್ಶನ್ ಅವರು ತಮ್ಮ ಶಕ್ತಿಯ ಹಿಂದಿನ ಕಾರಣವನ್ನು ತಿಳಿಸಿದ್ದಾರೆ.
ಆ ತಾಯಿ ಆಶೀರ್ವಾದದಿಂದಲೇ ನಾನು ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆದಿರೋದು. ಚಾಮುಂಡೇಶ್ವರಿ ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಅವರು ಹೇಳಿದ್ದಾರೆ. ಇನ್ನು ದರ್ಶನ್ ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಕುರುಕ್ಷೇತ್ರ ಸಿನಿಮಾದ ಸಾಹೋ ರೇ ಹಾಡು ನಿನ್ನೆ ಬಿಡುಗಡೆಯಾಗಿದ್ದು, ಇದಕ್ಕೆ ಅಭಿಮಾನಿಗಳಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.
click and follow Indiaherald WhatsApp channel