ಬೆಂಗಳೂರು: 43ನೇ ವಸಂತಕ್ಕೆ ಕಾಲಿಟ್ಟಿರುವ ದರ್ಶನ್ ಅಭಿಮಾಮಿಗಳ ಜೊತೆ ಅತ್ಯಂತ ಸಾಮಾನ್ಯ ವ್ಯಕ್ತಿಯಂತೆ ಸರಳವಾಗಿ ಸಂಭ್ರಮದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅಷ್ಟೇ ಸಾರ್ ಜೀವನಲ್ಲಿ ನಾನು ಮಾಡಿರೋದು, ಮತ್ತೇನು ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಷ್ಟಕ್ಕೂ ಹಾಗೆ ಹೇಳಲಿಕ್ಕೆ ಕಾರಣವೇನು ಗೊತ್ತಾ!?
 
ಸಾಮಾನ್ಯವಾಗಿ ಸೆಲೆಬ್ರಿಟಿಗಳು ದೊಡ್ಡದಾಗಿ ಬರ್ತಡೇ ಸೆಲಬರೇಟ್ ಮಾಡೋದು ನೋಡಿರುತ್ತೇವೆ, ಆದರೆ ಡಿ ಬಾಸ್ ದರ್ಶನ್ ತುಂಬಾ ಸರಳವಾಗಿ ಆಚರಿಸಿ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ದರ್ಶನ್ ಅವರಿಗೆ ಶುಭಕೋರಲು ಸಾವಿರಾರು ಅಭಿಮಾನಿಗಳು ರಾತ್ರಿಯೇ ಡಿ ಬಾಸ್ ಮನೆ ಮುಂದೆ ಜಮಾಯಿಸಿದ್ದರು. ಕಳೆದ ಬಾರಿಯಂತೆ ಈ ಬಾರಿ ಕೂಡ ದರ್ಶನ್ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
 
ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ದರ್ಶನ್ ಹುಟ್ಟುಹಬ್ಬದ ಖುಷಿಯನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಸಾವಿರಾರು ಸಂಖ್ಯೆ ಬಂದಿರೋದು ಹೇಗೆ ಅನಿಸುತ್ತಿದೆ ಎಂದು ಕೇಳಿದಾಗ, “ಅಷ್ಟೇ ಸಾರ್ ನಾನು ಜೀವನದಲ್ಲಿ ಮಾಡಿರೋದು. ಮತ್ತೇನು ಮಾಡಿಲ್ಲ” ಎಂದು ಅಭಿಮಾನಿಗಳು ತಮ್ಮ ಮೇಲಿಟ್ಟಿರುವ ಪ್ರೀತಿಯನ್ನು ಹೊಗಳಿದರು. ಇಂದು ಸಂಜೆವರೆಗೂ ಅಭಿಮಾನಿಗಳನ್ನು ಭೇಟಿ ಮಾಡೋದೊಂದೆ ಕಾರ್ಯಕ್ರಮ. ಬೇರೇನು ಇಲ್ಲ ಎಂದು ಹೇಳಿದ್ದು ಅಭಿಮಾನಿಗಳಿಗೆ ಇನ್ನಿಲ್ಲದ ಸಂತಸ ನೀಡಿತು. 
 
ಪ್ರತಿವರ್ಷದಂತೆ ಈ ವರ್ಷವೂ ಇದೆ. ಅಭಿಮಾನಿಗಳು ಬರ್ತಿದ್ದಾರೆ, ಬಂದಿದ್ದಾರೆ. ಮೊಲ, ಬಾತು ಕೋಳಿ ಗಿಫ್ಟ್ ತಂದಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಕೇಕ್ ಇಲ್ಲ, ಎಲ್ಲಾ ನೀಟಾಗಿದೆ. ಇವರು ಕೊಡೋ ದವಸ ಧಾನ್ಯಗಳು ಸಾಕಷ್ಟು ಜನರಿಗೆ ಉಪಯೋಗ ಆಗ್ತಿದೆ. ಅಭಿಮಾನಿಗಳು ಕೊಟ್ಟ ಈ ದಾನದಿಂದ ಮನೆ ತುಂಬುತ್ತಿದೆ ಎಂದು ಅಭಿಮಾನಿಗಳು ಕೊಟ್ಟ ಉಡುಗೊರೆಗಳ ಬಗ್ಗೆ ಡಿ ಬಾಸ್ ದರ್ಶನ್ ತಿಳಿಸಿದ್ದಾರೆ. 
 
ರಾಬರ್ಟ್ ಟೀಸರ್ ಬಗ್ಗೆ ಮಾತನಾಡಿ, ಸದ್ಯಕ್ಕೆ ಇದಷ್ಟೇ. ನೀವು ಈಗ ನೋಡಿರೋದು 10%ಮಾತ್ರ. ಇನ್ನೋನು 1ತಿಂಗಳಲ್ಲಿ ಸಿನಿಮಾ ಬಿಡುಗಡೆ ಆಗುತ್ತೆ ಎಂದು ಪ್ರತಿಕ್ರಿಯಿಸಿದರು. ರಾಜವೀರ ಮದಕರಿ ಶೂಟಿಂಗ್ ಶುರುವಾಗಿದೆ. ಸಿನಿಮಾ ಮುಗಿಯೋಕೆ ಇನ್ನು ಸಮಯ ಬೇಕು. ಅದರ ಬಗ್ಗೆ ಮುಂದೆ ಹೇಳ್ತಿನಿ ಎಂದು ತಿಳಿಸಿದ್ದಾರೆ.

మరింత సమాచారం తెలుసుకోండి: