ಹೈದರಾಬಾದ್: ಬಾಹಬಲಿಯಂತಹ ಸೂಪರ್ ಡೂಪರ್ ಚಿತ್ರ ನಿರ್ದೇಶಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ನಿರ್ದೇಶಕ ರಾಜಮೌಳಿ ನಿರ್ದೇಶನದ ‘ಆರ್‌.ಆರ್‌.ಆರ್’ 2018ರ ನವೆಂಬರ್ ತಿಂಗಳಲ್ಲಿ ಚಿತ್ರದ ಚಿತ್ರೀಕರಣ ಶುರುವಾಗಿದ್ದು, 2020ರ ಜುಲೈ ತಿಂಗಳ ಕೊನೆಯಲ್ಲಿ ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿತ್ತು. ಆದರೆ ಇತ್ತೀಚೆಗಷ್ಟೇ ಚಿತ್ರತಂಡ ಈ ಚಿತ್ರವನ್ನು 2021 ಜನವರಿ 8ಕ್ಕೆ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿತ್ತು. ಆದರೆ ಆಕೆ ಎಂಬುದರ ಕಾರಣವನ್ನು ಹೇಳಿರಲಿಲ್ಲ. ಆದರೆ ಚಿತ್ರ ಮುಂದೂಡಿದ್ದೇಕೆ ಎಂಬ ಮಾಹಿತಿ ಇಲ್ಲಿದೆ ನೋಡಿ. 
 
ಆರ್‌.ಆರ್‌.ಆರ್ ಚಿತ್ರದಲ್ಲಿ ಜೂ. ಎನ್‍.ಟಿ.ಆರ್ ಹಾಗೂ ರಾಮ್‍ ಚರಣ್ ಅವರ ಜೊತೆ ಹಾಲಿವುಡ್ ನಟ ಕೂಡ ನಟಿಸುತ್ತಿದ್ದಾರೆ. ಚಿತ್ರೀಕರಣದ ವೇಳೆ ಹಾಲಿವುಡ್ ನಟ ತೀವ್ರವಾಗಿ ಗಾಯಗೊಂಡಿದ್ದು, ದೀರ್ಘ ಸಮಯದ ವಿಶ್ರಾಂತಿಯಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಹಾಲಿವುಡ್ ನಟ, ರಾಮ್‍ ಚರಣ್ ಅವರ ಜೊತೆಗೆ ಚಿತ್ರದಲ್ಲಿ ಹಲವು ದೃಶ್ಯಗಳಲ್ಲಿ ನಟಿಸಿದ್ದಾರೆ. ಆದರೆ ಇವರಿಬ್ಬರ ಶೂಟಿಂಗ್ ಇನ್ನೂ ಪೂರ್ಣಗೊಂಡಿಲ್ಲ. ನಟ ವಿಶ್ರಾಂತಿ ಪಡೆದು ಬಂದ ಬಳಿಕವಷ್ಟೇ ಚಿತ್ರೀಕರಣ ನಡೆಸಲು ಚಿತ್ರತಂಡ ನಿರ್ಧಾರ ಮಾಡಿದೆ ಎಂಬುದು ತಿಳಿದುಬಂದಿದೆ. 
 
ಆರ್‌.ಆರ್‌.ಆರ್ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, 1920ರ ಕಾಲಘಟ್ಟದಲ್ಲಿ ನಡೆಯುವ ಕತೆ ಇದಾಗಿದೆ. ಅದಕ್ಕೆ ತಕ್ಕಂತೆ ಅದ್ಧೂರಿಯಾಗಿ ಸೆಟ್ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸುತ್ತಿದ್ದಾರೆ. ಈ ಚಿತ್ರ ಹೈದರಾಬಾದ್‍ ನ ನಿಜಾಮರ ಹಾಗೂ ಬ್ರಿಟಿಷರ ಆಡಳಿತದ ವಿರುದ್ಧ ಕೋಮರಾಮ್ ಭೀಮ ಮತ್ತು ಅಲ್ಲುರಿ ಸೀತಾರಾಮ ರಾಜು ಹೋರಾಟ ನಡೆಸುವ ಕತೆ ಆಗಿದ್ದು, ಜೂ. ಎನ್‍.ಟಿ.ಆರ್ ಕೋಮರಾಮ್ ಭೀಮನಾಗಿ ಕಾಣಿಸಿಕೊಂಡರೆ, ರಾಮ್ ಚರಣ್ ಸೀತಾರಾಮ ರಾಜನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 
 
ಭಾರೀ ಮೊತ್ತದ ಚಿತ್ರ ಇದಾಗಿದ್ದು ಒಟ್ಟು 300ಕೋಟಿಯಿದೆ.ಈ ಚಿತ್ರದಲ್ಲಿ ಬಾಲಿವುಡ್ ಕಲಾವಿದರಾದ ಅಲಿಯಾ ಭಟ್ ಮತ್ತು ಅಜಯ್ ದೇವಗನ್ ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ ಹತ್ತು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಕನ್ನಡದಲ್ಲಿಯೂ ಬಿಡುಗಡೆ ಆಗುವ ಸಾಧ್ಯತೆಗಳಿವೆ.

మరింత సమాచారం తెలుసుకోండి: