ಎಚ್.ವಿಶ್ವನಾಥ್ ಅವರು ಮತ್ತೆ ಜೆಡಿಎಸ್ ರಾಜ್ಯಾಧ್ಯಕ್ಷ ಆಗಲಿದ್ದಾರೆಯೇ ಅನ್ನೋ ಪ್ರಶ್ನೆಗೆ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೌದು ಎನ್ನುತ್ತಿದ್ದಾರೆಮ ಹಾಗಾದರೆ ಜೆಡಿಎಸ್ ನಲ್ಲಿ ನಡೆಯುತ್ತಿರೋದಾದರೂ ಏನು? ಜಿಟಿಡಿ ಹೀಗೆ ಅಂದಿದ್ಯಾಕೆ ಅನ್ನೋದೇ ಇಂಟರೆಸ್ಟಿಂಗ್.
ಹೌದು, ಮೈಸೂರಿನಲ್ಲಿ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡ, ನಿನ್ನೆ ಜೆಡಿಎಸ್ ಸಭೆ ನಡೆಯಿತು. ಈ ಸಭೆಯಲ್ಲಿ ಎಲ್ಲಾ ನಾಯಕರು ಚರ್ಚೆ ಮಾಡಿದ್ದೇವೆ. ಹೀಗಾಗಿ ಮುಂದೆಯೂ ಎಚ್.ವಿಶ್ವನಾಥ್ ಅವರೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಜಿಟಿಡಿ ಹೇಳಿದ್ದಾರೆ.
ನಾಳೆ ರಾಷ್ಟ್ರೀಯ ಅಧ್ಯಕ್ಷರು ಎಚ್. ವಿಶ್ವನಾಥ್ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ವಿಶ್ವನಾಥ್ ಅವರು ರಾಷ್ಟ್ರೀಯ ಅಧ್ಯಕ್ಷರ ಮಾತಿಗೆ ಬೆಲೆ ಕೊಟ್ಟು ಮತ್ತೆ ಜೆಡಿಎಸ್ ಅಧ್ಯಕ್ಷರಾಗಲಿದ್ದಾರೆ ಎಂದು ಜಿಟಿಡಿ ಶಾಕಿಂಗ್ ನ್ಯೂಸ್ ನೀಡಿದ್ದಾರೆ.
click and follow Indiaherald WhatsApp channel