ರಾಜ್ಯದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಹೀಗಾಗಿ ನೆರೆಯ ಮಹಾರಾಷ್ಟ್ರದಿಂದ ನೀರು ಬಿಡಿಸಿಕೊಳ್ಳಲು ಕುಮಾರಸ್ವಾಮಿ ಪ್ರಯತ್ನ ಪಡುತ್ತಿದ್ದಾರೆ. ಇದರ ಜೊತೆಗೆ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. 

 

ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡೋಕೆ ಸಮಯದ ಅವಕಾಶ ಕೇಳಲು ಕುಮಾರಸ್ವಾಮಿ ರಾಜಭವನದಲ್ಲಿ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದರು. ಈ ವೇಳೆ ಬೆಳಗಾವಿ ಜಿಲ್ಲೆಯ ಹಲವು ಗ್ರಾಮಗಳು ನೀರಿಲ್ಲದೇ ತತ್ತರಿಸಿ ಹೋಗುತ್ತಿವೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರ ತುರ್ತಾಗಿ ನೀರು ಬಿಡಲು ಸೂಚನೆ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. 

 

ಇದರ ಜೊತೆಗೆ ಮಹಾರಾಷ್ಟ್ರದಿಂದ ನೀರು ಬಿಡಿಸಿಕೊಳ್ಳಲು ಸರ್ಕಾರ ಮಾಡಿದ ಎಲ್ಲ ಪ್ರಯತ್ನಗಳನ್ನು ಕುಮಾರಸ್ವಾಮಿ ರಾಜ್ಯಪಾಲರ ಗಮನಕ್ಕೆ ತಂದಿದ್ದಾರೆ ಎಂದಿವೆ ಮೂಲಗಳು. 

 

మరింత సమాచారం తెలుసుకోండి: