ಹೆಸರಾಂತ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಅಧಿಕಾರವನ್ನು ವರ್ಗಾವಣೆ ಮಾಡಿದ್ದಾರೆ. ಇದೀಗ ರೋಹಿಣಿ ಕಟೋಚ್ ಸೇಪಟ್ ಅವರು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಕುರಿತು ಮತ್ತಷ್ಟು ಡಿಟೇಲ್ಸ್ ಇಲ್ಲಿದೆ ನೋಡಿ.
ಹೌದು, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠೆ ಆಗಿದ್ದ ರೋಹಿಣಿ ಅವರನ್ನು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ರೋಹಿಣಿ ಅವರು ಈ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ಇದೀಗ ರೋಹಿಣಿ ಮತ್ತೆ ಬೆಂಗಳೂರಿಗೆ ಬಂದಿದ್ದಾರೆ.
ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿದ್ದ ಅಣ್ಣಾಮಲೈ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಆದರೆ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ. ಮತ್ತೊಂದು ಕಡೆ ಅಣ್ಣಾಮಲೈ ಈಗಾಗಲೇ ರಾಜೀನಾಮೆ ನೀಡಿದ್ದು, ಇದು ಇನ್ನೂ ಅಂಗೀಕಾರವಾಗಿಲ್ಲ ಎನ್ನಲಾಗಿದೆ.
click and follow Indiaherald WhatsApp channel