ಜ್ಞಾನಪೀಠ ಪುರಸ್ಕೃತ, ಹಿರಿಯ ಸಾಹಿತಿ ಹಾಗೂ ನಟ ಮತ್ತು ನಿರ್ದೇಶಕರಾಗಿದ್ದ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೀವ್ರ ಸಂತಾಪ ಸೂಚಿಸಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ಗಿರೀಶ್ ಕಾರ್ನಾಡ್ ಅವರು ಅಧಮ್ಯ ಕೊಡುಗೆ ನೀಡಿದ್ದಾರೆ ಎಂದಿದೆ. 

 

ಹೌದು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಏಸ್.ಎ. ಚಿನ್ನೇಗೌಡ ಅವರು, ಕಾರ್ನಾಡ್ ಅವರ  ಅಕಾಲಿಕ ನಿಧನದಿಂದ ಕನ್ನಡ ಚಿತ್ರಲೋಕ, ಸಾಹಿತ್ಯ ಹಾಗೂ ರಂಗಭೂಮಿಗೆ ನಷ್ಟ ಉಂಟಾಗಿದೆ. ಅವರ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 

ಇನ್ನೂ ಕಾರ್ನಾಡ್ ಅವರ ನಿಧನ ಕುರಿತು ಅನೇಕ ನಟ ನಟಿಯರೂ ಸಂತಾಪ ವ್ಯಕ್ತಪಡಿಸಿದರು. 'ಕನ್ನಡ ಸಾಹಿತ್ಯ ಲೋಕಕ್ಕೆ ಗಿರೀಶ್ ಕಾರ್ನಾಡ್ ಅವರ ಕೊಡುಗೆ ಅಪಾರ. ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ. ಭಾವಪೂರ್ಣ ಶೃದ್ಧಾಂಜಲಿಗಳು ಎಂದು ನಟ ಉಪೇಂದ್ರ ಹೇಳಿದ್ದಾರೆ. 

 

మరింత సమాచారం తెలుసుకోండి: