ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗುರುವಾರ ಸಂಜೆ ಬೆಂಗಳೂರಿನಲ್ಲಿ ರೈಲು ಏರಿದರು. ಗ್ರಾಮ ವಾಸ್ತವ್ಯ ನಿಗಧಿ ಆಗಿರುವ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಗೆ ತೆರಳಲು ಮುಖ್ಯಮಂತ್ರಿ ಪ್ರಯಾಣ ಬೆಳೆಸಿದರು. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಾತ್ರಿ 7:30 ಕ್ಕೆ ರೈಲು ಏರಿದರು. 

 

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಶುಕ್ರವಾರ ನಸುಕಿನ ಜಾವ 3:48 ಕ್ಕೆ ಯಾದಗಿರಿ ರೈಲ್ವೆ ನಿಲ್ದಾಣ ತಲುಪಲಿದ್ದಾರೆ. ನಂತರ ರಸ್ತೆ ಮೂಲಕ ಗ್ರಾಮ ವಾಸ್ತವ್ಯ ನಿಗಧಿ ಆಗಿರುವ ಚಂಡರಕಿ ಕಡೆಗೆ ಪ್ರಯಾಣ ಬೆಳೆಸಲಿದ್ದಾರೆ.

ಕುಮಾರಸ್ವಾಮಿ ಅವರು ಬೆಳಿಗ್ಗೆ 7:30 ಕ್ಕೆ ಚಂಡರಕಿ ತಲುಪಲಿದ್ದು, ಬೆಳಿಗ್ಗೆ 10 ಗಂಟೆಗೆ ಅಲ್ಲಿನ ಸರ್ಕಾರಿ ಶಾಲೆಯಲ್ಲಿ ಜನತಾ ದರ್ಶನ ಆರಂಭಿಸುವವರು.

మరింత సమాచారం తెలుసుకోండి: