ಅತೃಪ್ತ ಶಾಸಕರ ಬಗ್ಗೆ ಇದೀಗ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಕಠಿಣ ನಿರ್ದಾರ ಕೈಗೊಂಡಿದ್ದಾರೆ. ಹೌದು, ಪಕ್ಷವನ್ನು ಬಿಟ್ಟು ಹೋಗಿರುವ ಅತೃಪ್ತ ಶಾಸಕರನ್ನು ಯಾವುದೇ ಕಾರಣಕ್ಕೂ ವಾಪಸ್ಸು ಕರೆದುಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.


ಹೌದು, ಸದನವನ್ನು ಉದ್ದೇಶಿಸಿ ಮಾತನಾಡಿದ, ಸಿಎಂ ಕುಮಾರಸ್ವಾಮಿ ಅವರಿಗೆ ಸ್ಪೀಕರ್ ಪ್ರಶ್ನೆ ಮಾಡಿದರು. ಒಂದು ವೇಳೆ ಅತೃಪ್ತ ಶಾಸಕರು ವಾಪಸ್ ಬಂದರೆ ಹೇಗೆ ಎಂದು. ಆಗ ಸಿಎಂ ಕುಮಾರಸ್ವಾಮಿ ಅವರು ಯಾವುದೇ ಕಾರಣಕ್ಕೂ ಅವರನ್ನು ವಾಪಾಸ್ ಕರೆದುಕೊಳ್ಳುವುದಿಲ್ಲ ಎಂದು ಖಡಕ್ ಆಗಿಯೇ ಹೇಳಿದ್ದಾರೆ. 


ಇನ್ನು ಮಧ್ಯಪ್ರವೇಶ ಮಾಡಿದ ಸಿದ್ದರಾಮಯ್ಯ ಅವರೂ ಸಹ ಪ್ರಳಯವಾದರೂ ನಾವು ನಮ್ಮ  ಪಕ್ಷ ಬಿಟ್ಟು ಹೋದವರನ್ನು ವಾಪಾಸ್ ಕರೆದುಕೊಳ್ಳುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು. ಹೀಗಾಗಿ ಅತೃಪ್ತರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿರೋದು ಸತ್ಯ.
-


మరింత సమాచారం తెలుసుకోండి: