ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುಇತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ 21 ದಿನಗಳ ಲಾಕ್ ಡೌನ್ ಅನ್ನು ಮಾಡಲಾಗಿತ್ತು ಆದರೂ ಕೂಡ ಕೊರೋನಾ ವೈರಸ್ ನಿಯಂತ್ರಣಕ್ಕೆ ಬರದ ಕಾರಣ ಏಪ್ರಿಲ್ 15 ರಿಂದ ಮೇ-3 ರವರೆಗೆ ಎರಡನೇ ಹಂತದ ಲಾಕ್ ಡೌನ್ ಅನ್ನು ಮಾಡಲಾಗಿದೆ. ಈ ಸಂದರ್ಭಲ್ಲಿ ಕೆಲವು ಮಾರ್ಗ ಸೂಚಿಗಳನ್ನು ಬಿಡುಗಡೆಯನ್ನು ಮಾಡಲಾಗಿದೆ. ಇದರ ಅನುಸಾರವಾಗಿಯೇ ಎಲ್ಲಾ ವ್ಯವಹಾರಗಳು ದೇಶದಲ್ಲಿ ನಡೆಯತಕ್ಕದ್ದು ಎಂದು ತಿಳಿಸಲಾಗಿದೆ.

 

 

ಕೇಂದ್ರ ಸರ್ಕಾರದಿಂದ ಲಾಕ್ಡೌನ್ ಮೇ 3ವರೆಗೆ ವಿಸ್ತರಿಸಲಾಗಿದ್ದು, ಕೇಂದ್ರ ಗೃಹ ಇಲಾಖೆ ಬಿಡುಗಡೆ ಮಾಡಿದ ಮಾರ್ಗಸೂಚಿ ಈ ಕೆಳಕಂಡತಿದೆ.

 

ಏನೆಲ್ಲಾ ಇರಲಿದೆ?

 

* ಎಲ್ಲಾ ಆಸ್ಪತ್ರೆಗಳು ತೆರೆದಿರಲಿವೆ. ಎಲ್ಲಾ ರೀತಿಯ ರೋಗಿಗಳಿಗೂ ಸೂಕ್ತ ಚಿಕಿತ್ಸೆ. ಆಸ್ಪತ್ರೆಗೆ ಸಂಬಂಧಿಸಿದ ಎಲ್ಲಾ ರೀತಿಯ ಲ್ಯಾಬ್, ಮೆಡಿಕಲ್ ಶಾಪ್ ಸೇರಿದಂತೆ ಎಲ್ಲವೂ ತೆರೆದಿರಲಿವೆ.

 

* ರೈತರು ಕೃಷಿ ಮತ್ತು ತೋಟಗಾರಿಕೆಯಲ್ಲಿ ಸಂಪೂರ್ಣವಾಗಿ ತೊಡಗಲು ಅನುವು. ರೈತರಿಗೆ ಪೂರಕವಾಗಿ ಗೊಬ್ಬರು, ಬೀಜ ಮತ್ತು ಕೃಷಿ ಸಲಕರಣೆಗಳನ್ನು ಮಾರಾಟ ಮಾಡುವ ಕಂಪೆನಿಗಳು ಕಾರ್ಯ ಆರಂಭಿಸಲು ಅವಕಾಶ.

 

* ಆಹಾರದ ಸರಪಳಿ ತುಂಡರಿಯದೆ ನೋಡಿಕೊಳ್ಳುವ ಸಲುವಾಗಿ ರೈತರಿಂದ ಪದಾರ್ಥಗಳನ್ನು ಕೊಂಡು ಮಾರುಕಟ್ಟೆಗೆ ಸಾಗಿಸುವ ಎಲ್ಲಾ ಮಾದರಿಯ ಸಂಪರ್ಕಕ್ಕೆ ಅವಕಾಶ.

 

* ಗ್ರಾಮೀಣ ಭಾಗದಲ್ಲಿ ಎಂಎನ್‌ಆರ್‌ಇಜಿಎ ಕೆಲಸಗಳಿಗೆ ಅನುಮತಿ. ಈ ಮೂಲಕ ಕೃಷಿ ಕೂಲಿಗಳಿಗೆ ಕೆಲಸ ಕೊಡಬಹುದು.

 

* ಅಡಿಗೆ ಅನಿಲ ಪೂರೈಕೆ, ನೀರು ಸರಬರಾಜು ಹಾಗೂ ಶುಚಿ ಕೆಲಸದಲ್ಲಿ ತೊಡಗಿರುವವರಿಗೆ ಯಾವುದೇ ತೊಂದರೆ ಇಲ್ಲ.

 

* ಗೂಡ್ಸ್ ರೈಲು ಎಂದಿನಂತೆ ಕಾರ್ಯನಿರ್ವಹಣೆ.

 

* ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಕಾರ್ಯ ನಿರ್ವಿಸಲು ಅವಕಾಶ.

 

* Iಖಿ ಉದ್ಯಮ ಶೇ.50 ರಷ್ಟು ಉದ್ಯೋಗಿಗಳ ಜೊತೆಗೆ ಕಚೇರಿಯಲ್ಲಿ ಎಂದಿನಂತೆ ಕಾರ್ಯಾರಂಭ ಮಾಡಲು ಅನುಮತಿ.

* ಗ್ರಾಮ ಪಂಚಾಯತಿ ಮಟ್ಟದ ಸರ್ಕಾರಿ ಕಚೇರಿಗಳು ತೆರೆದಿರುತ್ತವೆ.

 

* ವಿಶೇಷ ಆರ್ಥಿಕ ವಲಯದ ಅಡಿಯಲ್ಲಿ ಬರುವ ಎಲ್ಲಾ ಕೈಗಾರಿಕೆಗಳು ಹಾಗೂ ಆಹಾರ ಸಂರಕ್ಷಣಾ ಘಟಕಗಳು ಎಂದಿನಂತೆ ಕಾರ್ಯಾರಂಭ ಮಾಡಬಹುದು. ಆದರೆ, ಉದ್ಯೋಗಿಗಳನ್ನು ಸಾಮಾಜಿಕ ಅಂತರದ ನಿಮಯಮಗಳಿಗೆ ಅನುಸಾರವಾಗಿ ಕೈಗಾರಿಕೆಗಳಿಗೆ ಕರೆತರಬೇಕು. ಉತ್ತಮ ಸಾರಿಗೆ ವ್ಯವಸ್ಥೆ ಮಾಡಬೇಕು.

 

 

మరింత సమాచారం తెలుసుకోండి: