ಮುಂಬೈ: ರಾಷ್ಟ್ರದ ಆರ್ಥಿಕ ಹಿಂಜರಿಕೆ ಹಾಗೂ ಕೈಗಾರಿಕಾ ವಲಯದ ಉತ್ಪಾದನೆಗಳ ಭಾರೀ ಪ್ರಮಾಣದಲ್ಲಿ ಕುಸಿತ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ  ಉತ್ತೇಜನದ ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಷೇರುಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ ಭರ್ಜರಿ ದಾಖಲೆಯ ಏರಿಕೆ ಕಂಡಿದೆ.


ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ದೇಶಿಯ ಉತ್ಪಾದನಾ ಕಂಪನಿಗಳ ಕಾರ್ಪೋರೇಟ್​ ತೆರಿಗೆ ಹಾಗೂ ಆದಾಯ ತೆರಿಗೆ ಇಳಿಸಿರುವ ಕುರಿತು ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಮುಂಬೈ ಷೇರುಪೇಟೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಬಿ.ಎಸ್.ಇ ಸೆನ್ಸೆಕ್ಸ್ ದಿನದಂತ್ಯಕ್ಕೆ  1921.15 ಅಂಕಗಳ ಏರಿಕೆ ಕಂಡಿದ್ದು, ನಿಫ್ಚಿ ಕೂಡ 569.40 ಅಂಕಗಳ ಏರಿಕೆ ಕಂಡಿರುವುದು ತುಂಬಾ ವಿಶೇಷವಾಗಿದೆ. 


ರಾಷ್ಟ್ರದ ರೂಪಾಯಿ ಮೌಲ್ಯ ಹೆಚ್ಚಳ:


ಇದೇ ವೇಳೆ ಷೇರುಮಾರುಕಟ್ಟೆಯ ಚೇತೋಹಾರಿ ವಹಿವಾಟು ರೂಪಾಯಿ ಮೌಲ್ಯದಲ್ಲಿಯೂ ಸಕಾರಾತ್ಮಕ ಪರಿಣಾಮ ಬೀರಿದ್ದು, ರೂಪಾಯಿ ಮೌಲ್ಯದಲ್ಲಿ ಬರೊಬ್ಬರಿ 30 ಪೈಸೆ ಹೆಚ್ಚಳವಾಗಿದೆ. ಆ ಮೂಲಕ ಪ್ರತೀ ಡಾಲರ್ ಎದುರು ರೂಪಾಯಿ ಮೌಲ್ಯ 30 ಪೈಸೆ ಹೆಚ್ಚಳವಾಗಿದ್ದು, 70.67 ರೂ.ಗಳಾಗಿವೆ. 30ಪೈಸೆ ರೂಪಾಯಿ ಮೌಲ್ಯ ಹೆಚ್ಚಾಗಿರುವುದು ಸಂತಸದ ಸಂಗತಿಯಾಗಿದೆ. ಈಗೆ ಮುಂದೆ ಆರ್ಥಿಕತೆ ಹೆಚ್ಚಳಕ್ಕಾಗಿ ಕ್ರಮ ಕೈಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 


ಗೋವಾದಲ್ಲಿ ಇದು ಸುದ್ದಿಗೋಷ್ಠಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು, ಕಾರ್ಪೋರೇಟ್​ ತೆರಿಗೆಗಳನ್ನು ಕಡಿತಗೊಳಿಸುವ ಸುಗ್ರಿವಾಜ್ಞೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು. ಅದರಂತೆಯೇ ದೇಶಿಯ ಕಂಪನಿಗಳು ಪಾವತಿಸುವ ಆದಾಯ ತೆರಿಗೆಯನ್ನು 2019-20ನೇ ಸಾಲಿನ ಬೆಜೆಟ್​ನಲ್ಲಿ ಹೆಚ್ಚಿಸಲಾಗಿತ್ತು. ಆದರೆ ಈಗ ಅದನ್ನು ಶೇ.22ಕ್ಕೆ ಇಳಿಸಲಾಗಿದೆ. ಈ ಎಲ್ಲ ಕಡಿತಗಳಿಂದಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಿರೀಕ್ಷಿಸಲಾಗಿದ್ದ ಆದಾಯದಲ್ಲಿ 1,45,000 ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ವಿತ್ತ ಸಚಿವೆ ನಿರ್ಮಲಾ ಅವರು ಆರ್ಥಿಕ ತಜ್ಞರಾದ ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಿದ್ದರು. ಪ್ರಸ್ತುತ ಸರ್ಜರಿ ಮಾಡಿದ್ದು, ಮುಂದೇನಾಗುತ್ತದೆ ಎಂಬುದು ಕಾದುನೋಡಬೇಕಾಗಿದೆ. 


మరింత సమాచారం తెలుసుకోండి: